logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಉಡುಪಿ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
17 Mar 2023
post image

ಉಡುಪಿ: ಜಿಲ್ಲೆಯ ವಿವಿಧೆಡೆ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಉಡುಪಿ ತಾಲೂಕು ಶಿಶು ಅಭಿವೃದ್ಧಿ ಯೋಜನೆಯ ಗ್ರಾಮ ಪಂಚಾಯತ್, ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಾದ ಶಿವಾನಂದನಗರ (ಸಾಮಾನ್ಯ), ಹೆಜಮಾಡಿ ಬೋರುಗುಡ್ಡೆ (ಸಾಮಾನ್ಯ), ಕಾಜರಗುತ್ತು (ಸಾಮಾನ್ಯ), ಧರ್ಮೆಟ್ಟು (ಸಾಮಾನ್ಯ) ಮತ್ತು ಮಣಿಪುರ ವಿ.ಪಿ (ಸಾಮಾನ್ಯ) ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಕನಿಷ್ಠ ಪಿ.ಯು.ಸಿ ತೇರ್ಗಡೆ ಹೊಂದಿರುವ, ಎಸ್.ಎಸ್.ಎಲ್.ಸಿ.ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಅಭ್ಯಾಸ ಮಾಡಿರುವ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅದಮಾರು (ಸಾಮಾನ್ಯ), ಶಿವಾನಂದನಗರ (ಸಾಮಾನ್ಯ), ಬೊಳ್ಜೆ (ಸಾಮಾನ್ಯ), ಪಿತ್ರೋಡಿ (ಸಾಮಾನ್ಯ), ಬಬ್ಬರ್ಯಗುಡ್ಡೆ (ಸಾಮಾನ್ಯ), ಬೊಟ್ಟಲ (ಸಾಮಾನ್ಯ), ಎರ್ಮಾಳು ಬಡಾ (ಸಾಮಾನ್ಯ), ನವಶಕ್ತಿ (ಸಾಮಾನ್ಯ), ಮಹಾತ್ಮಾಗಾಂಧಿ ಶಾಲೆ (ಸಾಮಾನ್ಯ), ಎಲ್.ವಿ.ಪಿ-2 (ಸಾಮಾನ್ಯ), ಪೊಲಿಪು ಗರಡಿ (ಸಾಮಾನ್ಯ), ಕಡೆಕಾರು ಪಡುಕೆರೆ (ಸಾಮಾನ್ಯ) ಮತ್ತು ಮಣಿಪುರ ವಿ.ಪಿ (ಸಾಮಾನ್ಯ) ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಹುದ್ದೆಗೆ 19 ರಿಂದ 35 ವರ್ಷದೊಳಗಿನ ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಮುಕ್ತ ಶಾಲೆ/ಮುಕ್ತ ವಿದ್ಯಾಲಯಗಳಲ್ಲಿ ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿರುವ, ಪ್ರಥಮ/ದ್ವಿತೀಯ ಭಾಷೆಯಾಗಿ ಕನ್ನಡ, ಸಾಮಾನ್ಯ ಗಣಿತ ಮತ್ತು ಸಮಾಜ ವಿಜ್ಞಾನ ವಿಷಯಗಳನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿರುವ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 29 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಉಡುಪಿ ದೂರವಾಣಿ ಸಂಖ್ಯೆ : 0820-2524055 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಹರ್ಕೂರು ಗ್ರಾಮ (ಸಾಮಾನ್ಯ), ಜಪ್ತಿ ಗ್ರಾಮದ ಕರಿಕಲ್ ಕಟ್ಟೆ (ಸಾಮಾನ್ಯ) ಮತ್ತು ಯಡಮೊಗೆ ಗ್ರಾಮದ ಕೊಳಾಲಿ (ಎಸ್.ಟಿ) ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಕರ್ಕುಂಜೆ ಗ್ರಾಮದ ಹೆರ್ಜಾಡಿ (ಸಾಮಾನ್ಯ), ತೆಕ್ಕಟ್ಟೆ ಗ್ರಾಮ (ಸಾಮಾನ್ಯ), ತೆಕ್ಕಟ್ಟೆ ಗ್ರಾಮದ ಕೊಮೆ (ಸಾಮಾನ್ಯ), ಬೇಳೂರು ಗ್ರಾಮದ ದೇವಸ್ಥಾನಬೆಟ್ಟು (ಸಾಮಾನ್ಯ), ಹೆಸ್ಕತ್ತೂರು ಗ್ರಾಮ (ಸಾಮಾನ್ಯ), ಹರ್ಕೂರು ಗ್ರಾಮ (ಸಾಮಾನ್ಯ), ಹಾರ್ದಳ್ಳಿ-ಮಂಡಳ್ಳಿ ಗ್ರಾಮದ ಕೊಳನ್ಕಲ್ (ಸಾಮಾನ್ಯ), ವಾರ್ಡ್-3 ರ ಕರ್ನಾಟಕ ಟೈಲ್ಸ್ (ಸಾಮಾನ್ಯ), ಮೊಳಹಳ್ಳಿ ಗ್ರಾಮದ ಮಾಸ್ತಿಕಟ್ಟೆ (ಸಾಮಾನ್ಯ), ಅಮಾಸೆಬೈಲು ಗ್ರಾಮದ ಬಳ್ಮನೆ (ಸಾಮಾನ್ಯ), ಕುಳಂಜೆ ಗ್ರಾಮದ ಭರತ್ಕಲ್ (ಸಾಮಾನ್ಯ), ಯಡ್ತರೆ ಗ್ರಾಮದ ಕೊರಾಡಿ (ಎಸ್.ಟಿ) ಹಾಗೂ ಕೊಡ್ಲಾಡಿ ಗ್ರಾಮದ ಮಾರ್ಡಿ (ಎಸ್.ಟಿ) ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಸಹಾಯಕಿ ಹುದ್ದೆಗಳ ನೇಮಕಾತಿಗೆ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.