



ಉಡುಪಿ,: ಆಂಧ್ರ ವಿಶ್ವವಿದ್ಯಾಲಯವು ಕೇಂದ್ರ ಸೈನಿಕ ಮಂಡಳಿಯ ಎಂ.ಓ.ಯು ದೊಂದಿಗೆ ಮಾಜಿ ಸೈನಿಕರಿಗೆ ನೀಡಲಾಗುವ ಬಿ.ಎ (ಹೆಚ್.ಆರ್.ಎಂ) ಪ್ರಮಾಣ ಪತ್ರಕ್ಕಾಗಿ ಬೆಂಗಳೂರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶನಾಲಯದ ವತಿಯಿಂದ ಮೇ 4 ನೇ ವಾರ ಹಾಗೂ ನವೆಂಬರ್ 4 ನೇ ವಾರದಲ್ಲಿ ಪರೀಕ್ಷೆಯನ್ನು ನಡೆಸಲಾಗುವುದು. ಮಾಜಿ ಸೈನಿಕರು ಅರ್ಜಿ ನಮೂನೆಯನ್ನು ಏ.1 ರಿಂದ 25 ರ ವರೆಗೆ ಹಾಗೂ ಅಕ್ಟೋಬರ್ 1 ರಿಂದ 25 ರ ವರೆಗೆ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಏ.30 ಹಾಗೂ ಅ. 30 ರ ಒಳಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.