



ಉಡುಪಿ:
ರಾಜ್ಯದ ಹಲವೆಡೆ ಕಡಿಮೆ ಬೆಲೆಗೆ ಚಿನ್ನಾಭರಣ ಮಾರಾಟ ಹಾಗೂ ವಿಮಾನ ನಿಲ್ದಾಣದಲ್ಲಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಖತರ್ನಾಕ್ ದಂಪತಿಯನ್ನು ಈಶಾನ್ಯ ವಿಭಾಗದ ಪೊಲೀಸರು ಉಡುಪಿಯಲ್ಲಿ ಬಂಧಿಸಿದ್ದಾರೆ. ಧನುಷ್ಯಾ ಅಲಿಯಾಸ್ ರಾಚೆಲ್ ಹಾಗೂ ಆಕೆಯ ಪತಿ ದರ್ಬಿನ್ ದಾಸ್ ಅಲಿಯಾಸ್ ಮೋಹನ್ ದಾಸ್ ಬಂಧಿತ ಆರೋಪಿಗಳು. ವಂಚನೆಯನ್ನೇ ವೃತ್ತಿ ಮಾಡಿಕೊಂಡಿದ್ದ ದಂಪತಿ, ಪದೇ ಪದೇ ಊರು ಬದಲಾಯಿಸುತ್ತಿದ್ದರು. ವಾಸವಿದ್ದ ಸ್ಥಳಗಳಲ್ಲಿ ಜನರನ್ನು ಪರಿಚಯ ಮಾಡಿಕೊಂಡು ವಂಚಿಸಿ ಪರಾರಿಯಾಗುತ್ತಿದ್ದರು. ಇವರಿಂದ ಸದ್ಯ 34.50 ಲಕ್ಷ ನಗದು ಹಾಗೂ 106 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.