logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಉಚಿತ ತೆಂಕುತಿಟ್ಟು ಯಕ್ಷಗಾನ ನಾಟ್ಯ ತರಬೇತಿಯ 2025ರ ಹೊಸ ತರಗತಿ(ಬ್ಯಾಚ್) ಆರಂಭ.

ಟ್ರೆಂಡಿಂಗ್
share whatsappshare facebookshare telegram
12 Jan 2025
post image

ಉಡುಪಿ, ಜ.12: ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನ, ಉಡುಪಿ ಇವರ ವತಿಯಿಂದ ನಡೆಯುತ್ತಿರುವ ತೆಂಕುತಿಟ್ಟು ಯಕ್ಷಗಾನ ನಾಟ್ಯ (ಹೆಜ್ಜೆಗಾರಿಕೆ) ತರಬೇತಿ ಕಾರ್ಯಕ್ರಮದ ಹೊಸ ತರಗತಿ ಆರಂಭಗೊಂಡಿದೆ. ಕಳೆದ 8 ವರ್ಷಗಳಿಂದ ಉಡುಪಿಯ ಸೋದೆ ಮಠದಲ್ಲಿ ಸಮರ್ಥ ಯಕ್ಷಗುರು ಶ್ರೀ ರಾಕೇಶ್ ರೈ ಅಡ್ಕ ಇವರ ಮೂಲಕ ಸುಮಾರು 100 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದೆ.

ತರಬೇತಿ ಉಚಿತವಾಗಿದ್ದು, ಪ್ರತೀ ಬುಧವಾರ ಸಂಜೆ ಗಂಟೆ 5.30ರಿಂದ 6.30ರವರೆಗೆ ನಡೆಯಲಿರುವುದು. ಪ್ರತಿಷ್ಠಾನದ ಈ ಸತ್ಕಾರ್ಯಕ್ಕೆ ಸೋದೆ ಮಠದ ಶ್ರೀ ಶ್ರೀ ವಿಶ್ವವಲ್ಲಭ ಶ್ರೀಪಾದರು ತಮ್ಮ ಮಠದಲ್ಲಿ ಸ್ಥಳಾವಕಾಶವನ್ನು ಕಲ್ಪಿಸಿಕೊಟ್ಟು ಈ ಕಾರ್ಯವನ್ನು ಪೋಷಿಸುತ್ತಾ ಬಹುವಾಗಿ ಅನುಗ್ರಹಿಸುತ್ತಿದ್ದಾರೆ. ವಯಸ್ಸಿನ ಮಿತಿಯಿಲ್ಲದೆ ಆಸಕ್ತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಪ್ರತಿಷ್ಠಾನದ ವತಿಯಿಂದ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ: ಸಂಖ್ಯೆ 9844212104 / 9663424981/9845150802 ಸಂಪರ್ಕಿಸಬಹುದು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.