



ಉಡುಪಿ: ಮದುವೆಯಾಗುವುದಾಗಿ ನಂಬಿಸಿ ಯುವಕನೋರ್ವ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಮಣಿಪಾಲದಲ್ಲಿ ನಡೆದಿದೆ. ಈ ಬಗ್ಗೆ ಸಂತ್ರಸ್ತ ಯುವತಿ ಉಡುಪಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ತಮಿಳುನಾಡಿನ ವೆಲ್ಲೂರು ನಿವಾಸಿ ಪ್ರಶಾಂತ್ ಮುದಲಿಯಾರ್ ವಿರುದ್ಧ ಅತ್ಯಾಚಾರ ಕಾಲೇಜ್ ದಿನಗಳಲ್ಲಿ ಯುವತಿಯ ಪರಿಚಯವಾಗಿ ಪರಸ್ಪರ ಇಬ್ಬರು ಪ್ರೀತಿಸುತ್ತಿದ್ದರು. ಕಳೆದ ಜೂನ್ ನಲ್ಲಿ ಯುವಕ ತಾನು ಕೆಲಸ ಮಾಡುತ್ತಿದ್ದ ಮಣಿಪಾಲಕ್ಕೆ ಯುವತಿಯನ್ನು ಕರೆಸಿ ದೈಹಿಕ ಸಂಪರ್ಕ ಬೆಳೆಸಿದ್ದ. ಬಳಿಕ ಯುವತಿ ಮದುವೆ ಆಗುವಂತೆ ಕೇಳಿಕೊಂಡರೂ, ಜಾತಕ ಸರಿ ಇಲ್ಲ ಎಂದು ಮದುವೆಗೆ ನಿರಾಕರಿಸಿ ವಂಚಿಸಿದ್ದಾಗಿ ಯುವತಿ ಉಡುಪಿ ಮಹಿಳಾ ಠಾಣೆಗೆ ದೂರು ನೀಡಿದ್ದಾಳೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.