logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಮಲ್ಪೆಯ ಆಳಸಮುದ್ರ ಬೋಟ್‌ರತ್ನಗಿರಿ ಸಮೀಪ ಮುಳುಗಡೆ. ಲಕ್ಷಾಂತರ ಹಾನಿ

ಟ್ರೆಂಡಿಂಗ್
share whatsappshare facebookshare telegram
19 Apr 2022
post image

ಉಡುಪಿ: ಮಲ್ಪೆಯ ಆಳಸಮುದ್ರ ಬೋಟ್‌ರತ್ನಗಿರಿ ಸಮೀಪ ಮುಳುಗಡೆಯಾಗಿದ್ದು ಲಕ್ಷಾಂತರ ಹಾನಿ ಸಂಭವಿಸಿದೆ. ಕಡೆಕಾರು ಪಡುಕರೆ ಭಗವಾನ್‌ದಾಸ್‌ ಕೋಟ್ಯಾನ್‌ ಅವರಿಗೆ ಸೇರಿದ ದಿವ್ಯಶಕ್ತಿ ಆಳಸಮುದ್ರ ಬೋಟ್‌ ಎ.10ರಂದು ಮಲ್ಪೆಯಿಂದ ತೆರಳಿತ್ತು. ಎ. 13ರಂದು ರಾತ್ರಿ 9.30ರ ವೇಳೆಗೆ ರತ್ನಗಿರಿಯ ಸಮೀಪ ಮೀನುಗಾರಿಕೆ ನಡೆಸುತ್ತಿರುವಾಗ ಗಟ್ಟಿಯಾದ ವಸ್ತು ಬೋಟಿನ ತಳಭಾಗಕ್ಕೆ ತಾಗಿದ್ದು ಪರಿಣಾಮ ಬೋಟಿನ ಒಳಕ್ಕೆ ನೀರು ಬರಲಾರಂಭಿಸಿತು. ಸಮೀಪದಲ್ಲಿದ್ದ ನೀಲಾದ್ರಿ ಮತ್ತು ಸುವರ್ಣ ಛಾಯ ಬೋಟಿನವರಿಗೆ ಮಾಹಿತಿ ನೀಡಿದಾಗ, ತತ್‌ಕ್ಷಣ ಧಾವಿಸಿ ಬಂದ ಅವರು ಬೋಟಿನಲ್ಲಿದ್ದ ದೇವೇಂದ್ರ, ಸತೀಶ, ಮಾದಪ್ಪ, ನವೀನ, ಮಹೇಂದ್ರ, ಚಂದ್ರಕಾಂತ ಮತ್ತು ರವಿ ಅವರನ್ನು ರಕ್ಷಿಸಿದರು.

ದಿವ್ಯಶಕ್ತಿ ಬೋಟ್‌ ಸಂಪೂರ್ಣ ಮುಳುಗಡೆಗೊಂಡಿದ್ದು ಅದರಲ್ಲಿ ಡೀಸೆಲ್‌, ಮೀನು ಹಾಗೂ ಇನ್ನಿತರ ಪರಿಕರಗಳು ಸಮುದ್ರ ಪಾಲಾಗಿವೆ. ಸುಮಾರು 70 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.