



ಉಡುಪಿ: ಸೇಲ್ಸ್ ಮೆನ್ ನ ಗಮನ ಬೇರೆಡೆಗೆ ಸೆಳೆದು ಇಬ್ಬರು ಮಹಿಳೆಯರು ಲಕ್ಷಾಂತರ ರೂಪಾಯಿ ಬೆಲೆಬಾಳುವ ಚಿನ್ನದ ಬಳೆಗಳನ್ನು ಕಳವು ಮಾಡಿರುವ ಘಟನೆ ಉಡುಪಿಯ ಸುಲ್ತಾನ್ ಡೈಮಂಡ್ & ಗೋಲ್ಡ್ ಜ್ಯುವೆಲ್ಲರ್ಸ್ ಮಳಿಗೆಯಲ್ಲಿ ನಡೆದಿದೆ. ನ.23ರಂದು ಸಂಜೆ 6.15ರ ಸುಮಾರಿಗೆ ಉಡುಪಿ ವಿದ್ಯಾಸಮುದ್ರ ಮಾರ್ಗದಲ್ಲಿರುವ ಸುಲ್ತಾನ್ ಡೈಮಂಡ್ & ಗೋಲ್ಡ್ ಆಭರಣ ಮಳಿಗೆಗೆ ಆಭರಣ ಖರೀದಿಸುವ ನೆಪದಲ್ಲಿ ಬುರ್ಖಾ ಧರಿಸಿದ ಮಹಿಳೆಯರಿಬ್ಬರು ಬಂದಿದ್ದು, ಅವರಿಗೆ ಮಳಿಗೆಯ ಮೊಹಮ್ಮದ್ ಮುಬಾರಕ್ ಚಿನ್ನದ ಬಳೆಗಳನ್ನು ತೋರಿಸಿದ್ದಾರೆ. ಆದರೆ ಆರೋಪಿ ಮಹಿಳೆಯರಿಬ್ಬರು ಮುಬಾರಕ್ ಅವರ ಗಮನವನ್ನು ಬೇರೆಡೆಗೆ ಸೆಳೆದು ಒಟ್ಟು 60 ಗ್ರಾಂ ತೂಕದ ₹3 ಲಕ್ಷ ಮೌಲ್ಯದ 4 ಚಿನ್ನದ ಬಳೆಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಜ್ಯುವೆಲ್ಲರ್ಸ್ ಮಳಿಗೆಯ ಮ್ಯಾನೇಜರ್ ಮೊಹಮ್ಮದ್ ಅಜ್ಮಲ್ ನೀಡಿರುವ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.