



ಉಡುಪಿ: ಯುವಕನೊರ್ವ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ 76 ಬಡಗುಬೆಟ್ಟು ಗ್ರಾಮದ ಬೈಲೂರಿನ ವಾಸುಕಿನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ವಾಸುಕಿನಗರದ ನಿವಾಸಿ ಮಣಿವಣ್ಣನ್ ಅವರ ಮಗ 33 ವರ್ಷದ ಸುಮೇಶ್ ಎಮ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಎ.ಎಸ್.ಐ ನಾರಾಯಣ ಬಿ, ತನಿಖಾ ಸಹಾಯಕ ವಿಶ್ವನಾಥ ಶೆಟ್ಟಿ ಅಮಾಸೆಬೈಲು ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ವೈದ್ಯಕೀಯ ಪರೀಕ್ಷೆಗೆ ಶವ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಸಹಕರಿಸಿದರು..
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.