logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿಯ ಶ್ರೀಮತಿ ವಿದ್ಯಾ ಸರಸ್ವತಿ ಯವರಿಗೆ ಪ್ರೈಡ್ ಆಫ್ ನಮ್ಮ ಬೆಂಗಳೂರು ಪ್ರಶಸ್ತಿಗೆ ಆಯ್ಕೆ

ಟ್ರೆಂಡಿಂಗ್
share whatsappshare facebookshare telegram
4 Mar 2022
post image

ಉಡುಪಿ : ಸ್ವರ್ಣ ಭಾರತ್ ಫೌಂಡೇಶನ್ ಬೆಂಗಳೂರು ವತಿಯಿಂದ ನೀಡಲ್ಪಡುವ ಪ್ರತಿಷ್ಟಿತ ಪ್ರಶಸ್ತಿಯಾದ ಪ್ರೈಡ್ ಆಫ್ ನಮ್ಮ ಬೆಂಗಳೂರು ಪ್ರಶಸ್ತಿ 2021ನ ಮಹಿಳಾ ಸಾಧನಾ ವಿಭಾಗದ ಸಾಧನಾ ಪ್ರಶಸ್ತಿಯನ್ನು ಉಡುಪಿಯ ಶ್ರೀಮತಿ ವಿದ್ಯಾ ಸರಸ್ವತಿ ಪಡೆದಿದ್ದಾರೆ ಈ ಪ್ರಶಸ್ತಿಯನ್ನು ಭಾರತದ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರು, ಭಾರತದ ಮಾಜಿ ಸಾಲಿಸಿಟರ್ ಜನರಲ್ ಮತ್ತು 2006 ರಿಂದ 2011 ರವರೆಗೆ ಕರ್ನಾಟಕ ರಾಜ್ಯಕ್ಕೆ ಲೋಕಾಯುಕ್ತ ( ಓಂಬುಡ್ಸ್‌ಮನ್ ) ಆದ ಮಾನ್ಯ ನಿಟ್ಟೆ ಸಂತೋಷ್ ಹೆಗ್ಡೆರವರ ಮೂಲಕ ಪ್ರಶಸ್ತಿಯನ್ನು ನೀಡಲಾಯಿತು. ಈ ಪ್ರಶಸ್ತಿಯನ್ನು ಡಿಸೆಂಬರ್ 2021ನಲ್ಲಿ ಕೊಡಬೇಕಾಗಿದ್ದು. ಆದರೆ ಕೋವಿಡ್ ಸಲುವಾಗಿ ಮಾರ್ಚ್ 2 2022ರಂದು ಬೆಂಗಳೂರಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕರ್ಣಾಟಕದ ಪ್ರಧಾನ ಕಛೇರಿಯ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀಮತಿ ವಿದ್ಯಾ ಸರಸ್ವತಿಯವರು ತಮ್ಮ 50ನೇ ವಯಸ್ಸಿನಲ್ಲಿ, 2021-2022ರ ಮಿಸೆಸ್ ಇಂಡಿಯಾ ಕರ್ನಾಟಕ ಸೌಂದರ್ಯ ಸ್ಪರ್ದೆಯಲ್ಲಿ ಭಾಗವಹಿಸಿ ಯೋಧ ರಾಣಿ ಆಫ್ ಮಿಸೆಸ್ ಇಂಡಿಯಾ ಕರ್ನಾಟಕ 2021 ಮತ್ತು ಕ್ಲಾಸಿಕ್ ಮಿಸೆಸ್ ಇಂಡಿಯಾ ಕರ್ನಾಟಕ ಉಡುಪಿ 2021ಎಂಬ ಎರಡು ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ.ಸಾಧಿಸಲು ವಯಸ್ಸು ಮುಖ್ಯವಲ್ಲ, ಸಾಧಿಸುವ ಛಲವೊಂದಿದ್ದರೆ ಮಹಿಳೆ ತನ್ನ ಮನೆಯ ಸುವಾರ್ತೆಯನ್ನು ನಿಭಾಯಿಸುವುದರ ಜೊತೆಜೊತೆಯಾಗಿಯೂ, ಸಾಧನೆಯನ್ನು ಮಾಡುವುದರ ಮೂಲಕ ಇವರು ಮಾದರಿಯಾಗಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.