



'ಆಗಸ್ಟ್ 26 ಕಾಸರಗೋಡಿನ 'ಪದ್ಮಗಿರಿ ಕಲಾ ಕುಟೀರ'ದಲ್ಲಿ ರಂಗಚಿನ್ನಾರಿ ಕಾಸರಗೋಡು (ರಿ) ಇದರ ಮಹಿಳಾ ಘಟಕ 'ನಾರಿಚಿನ್ನಾರಿ'ಯ ಕಾರ್ಯಕ್ರಮ 'ಓಣಂ ಸಂಧ್ಯಾ' ದಲ್ಲಿ ಸಾಹಿತಿ, ಉಡುಪಿಯ ಎಂಜಿಎಂ ಕಾಲೇಜಿನ ಉಪನ್ಯಾಸಕಿ ಕಾತ್ಯಾಯಿನಿ ಕುಂಜಿಬೆಟ್ಟು ಅವರ ಐದು ಕೃತಿಗಳು ಅನಾವರಣಗೊಂಡವು.
ಏಕತಾರಿ ಸಂಚಾರಿ (ಕವನ ಸಂಕಲನ) ಕೊಕ್ಕೊ ಕೋಕೋ (ಮಕ್ಕಳ ನಾಟಕ) ಶಿವರಾಮ ಕಾರಂತರ ಕನ್ನಡ ಪ್ರಜ್ಞೆ (ಸಂಪಾದಿತ) ಕನಕದಾಸೆರ್ನ ರಾಮಧಾನ್ಯ ಚರಿತೆ (ಅನುವಾದ) ಮೊಗೇರಿ ಗೋಪಾಲಕೃಷ್ಣ ಅಡಿಗ (ವಾಚಿಕೆ) ಈ ಐದು ಕೃತಿಗಳನ್ನು ಗಡಿನಾಡಿನ ಮಹತ್ವದ ಮಹಿಳಾ ಬರಹಗಾರರಾದ ವಿಜಯಲಕ್ಷ್ಮೀ ಶ್ಯಾನ್ ಭೋಗ್, ಸರ್ವಮಂಗಳ ಜಯ್ ಪುಣಿಚಿತ್ತಾಯ, ದಿವ್ಯಾ ಗಟ್ಟಿ ಪರಕ್ಕಿಲ, ಸ್ನೇಹಲತಾ ದಿವಾಕರ್ ಹಾಗೂ ಡಾ.ಮಹೇಶ್ವರಿಯವರು ಬಿಡುಗಡೆಗೊಳಿಸಿದರು. ಕಾಸರಗೋಡು ಸರ್ಕಾರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಲಕ್ಷ್ಮೀ ಕೆ. ಅವರು ಕೃತಿಗಳನ್ನು ಪರಿಚಯಿಸಿದರು.
'ಓಣಂ ಸಂಧ್ಯಾ ' ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರೀಯ ವಿಶ್ವವಿದ್ಯಾಲಯ ಕಾಸರಗೋಡು ಸಹಾಯಕ ಪ್ರಾಧ್ಯಾಪಕರಾದ ಡಾ. ಲಕ್ಷ್ಮಿ ಅವರು ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಲೆಕ್ಕ ಪರಿಶೋಧಕರು ಹಾಗೂ ನಾರಿ ಚಿನ್ನಾರಿಯಾ ಗೌರವಾಧ್ಯಕ್ಷರಾದ ತಾರಾ ಜಗದೀಶ್ ಅವರು ವಹಿಸಿದ್ದರು. ರಂಗ ಚಿನ್ನಾರಿ ಇದರ ಮುಖ್ಯಸ್ಥ ಕಲಾವಿದ ಕಾಸರಗೋಡು ಚಿನ್ನಾ ಅವರು ಆಶಯದ ನುಡಿಗಳನ್ನು ನುಡಿದರು .
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.