



ಉಪ್ಪಿನಂಗಡಿ: ಕಾಲೇಜಿಗೆ ಹೋಗುತ್ತಿದ್ದಾಗ ದಾರಿ ಮಧ್ಯೆ ಕುಸಿದು ಬಿದ್ದ ಉಪ್ಪಿನಂಗಡಿಯ ಕಾಲೇಜು ವಿದ್ಯಾರ್ಥಿಯೋರ್ವನು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಮೃತ ದುರ್ದೈವಿಯನ್ನು ಉಪ್ಪಿನಂಗಡಿಯ ಸರಕಾರಿ ಪ.ಪೂ.ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಮುಹಮ್ಮದ್ ಸಿರಾಜುದ್ದೀನ್ (17) ಎಂದು ಗುರುತಿಸಲಾಗಿದೆ.
ಕೊಯಿಲದ ಗಂಡಿಬಾಗಿಲು ನಿವಾಸಿ ಸಿರಾಜುದ್ದೀನ್ ಕಾಲೇಜಿಗೆಂದು ಬೆಳಗ್ಗೆ ತನ್ನ ಸ್ನೇಹಿತರೊಂದಿಗೆ ಬಂದಿದ್ದಾನೆ. ಕಾಲೇಜಿನ ದಾರಿ ಮಧ್ಯೆ ಬಿ.ಪಿ. ಲೋ ಸಮಸ್ಯೆಯಿಂದ ತಲೆ ತಿರುಗಿ ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣ ಜೊತೆಗಿದ್ದವರು ಸಿರಾಜುದ್ದೀನ್ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಿರಾಜುದ್ದೀನ್ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.