



ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇವರ ವತಿಯಿಂದ ಪ್ರಭಾವತಿ ಶೆಣೈ ಹಾಗೂ ಉಡುಪಿ ವಿಶ್ವನಾಥ್ ಶೆಣಿೈ ಪ್ರಾಯೋಜಿತ 'ವಿಶ್ವಪ್ರಭಾ ಪುರಸ್ಕಾರ - 2023 'ನ್ನು ತರಂಗದ ವ್ಯವಸ್ಥಾಪಕ ನಿರ್ದೇಶಕಿ ಹಾಗೂ ಸಾಹಿತಿ ಸಂಧ್ಯಾ ಪೈ ಅವರಿಗೆ ನೀಡಲಾಗುವುದು .
ಪ್ರಶಸ್ತಿಯು ಪ್ರಶಸ್ತಿ ಪತ್ರ , ಫಲಕ ಹಾಗೂ ಒಂದು ಲಕ್ಷ ರೂಪಾಯಿ ನಗದು ಒಳಗೊಂಡಿರುತ್ತದೆ.
ಇದೇ ಮುಂಬರುವ ಜನವರಿ ತಿಂಗಳಲ್ಲಿ ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ್ಣ ಮಂಟಪದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು . ಈ ಪ್ರಯುಕ್ತ ಕಾರ್ಕಳ ಯಕ್ಷ ರಂಗಾಯಣದ ಕಲಾವಿದರಿಂದ ಶಶಿರಾಜ್ ರಾವ್ ಕಾವೂರ್ ರಚಿಸಿದ ಡಾII ಜೀವನ್ ರಾಮ್ ಸುಳ್ಯ ನಿರ್ದೇಶನದ 'ಪರಶುರಾಮ ' ನಾಟಕ ಪ್ರದರ್ಶನಗೊಳ್ಳಲಿದೆ ಎಂದು ವಿಶ್ವಪ್ರಭಾ ಪುರಸ್ಕಾರ ಸಮಿತಿಯ ಸಂಚಾಲಕ ಮರವಂತೆ ನಾಗರಾಜ ಹೆಬ್ಬಾರ್ ತಿಳಿಸಿರುತ್ತಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.