logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆಗೆ ರಾಷ್ಟ್ರೀಯ ಉಪಾಧ್ಯಕ್ಷರ ಭೇಟಿ

ಟ್ರೆಂಡಿಂಗ್
share whatsappshare facebookshare telegram
7 Jun 2023
post image

ಉಡುಪಿ: ಉಡುಪಿ ಕುಂಜಿಬೆಟ್ಟು ಸಿ ಎ ಭವನಕ್ಕೆ ಮಂಗಳವಾರ ಭಾರತೀಯ ಲೆಕ್ಕಪರಿಶೋಧಕ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷರಾದ ಸಿ.ಎ.ರಂಜಿತ್ ಕುಮಾರ್ ಅಗರ್ವಾಲ್ ಭೇಟಿ ನೀಡಿದರು. ಸಂಸ್ಥೆಯ ಅಭಿವೃದ್ಧಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಭಾರತ ದೇಶದ ಅಭಿವೃದ್ಧಿಯಲ್ಲಿ ಲೆಕ್ಕಪರಿಶೋಧಕರ ಪಾತ್ರ ಮಹತ್ವದಾಗಿದೆ. ದೇಶದಲ್ಲಿ ಹೊಸದಾಗಿ ಸಿ ಎ ಪಾಸ್ ಪಡೆಯುವ ಲೆಕ್ಕಪರಿಶೋಧಕರ ಅವ್ಯಶಕತೆ ಇದ್ದು, ಈ ನಿಟ್ಟಿನಲ್ಲಿ ಕಾರ್ಯ ರೂಪಿಸುವಂತೆ ಕರೆ ನೀಡಿದರು. ವಿದ್ಯಾರ್ಥಿ ಗಳ ಜೊತೆ ಸಂವಾದ ಕಾರ್ಯ ನೆಡೆಸಿದರು.
ಸಮಾರಂಭದಲ್ಲಿ ಸಂಸ್ಥೆ ವತಿಯಿಂದ ರಾಷ್ಟ್ರೀಯ ಉಪಾಧ್ಯಕ್ಷರಾದ ಸಿ.ಎ.ರಂಜಿತ್ ಕುಮಾರ್ ಅಗರ್ವಾಲ್ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಿ.ಎ.ಕೋತಾ ಎಸ್. ಶ್ರೀನಿವಾಸ್, ಸಿ.ಎ.ಪ್ರಸನ್ನ ಕುಮಾರ್, ಸಿ.ಎ.ಮಂಗೇಶ್ ಕಿನಾರೆ, ಸಿ.ಎ.ಗೀತಾ ಎ.ಬಿ. ಹಾಗೂ ಉಡುಪಿ ಸಿ.ಎ.ಸಂಸ್ಥೆಯ ಅಧ್ಯಕ್ಷರಾದ ಸಿ.ಎ.ಮಹೇಂದ್ರ, ಸ್ಥಾಪಕ ಅಧ್ಯಕ್ಷ ಸಿ.ಎ.ಗುಜ್ಜಾಡಿ ಪ್ರಭಾಕರ ನಾಯಕ್, ಸಿ ಎ ಲೋಕೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.