logo
WhatsApp Image 2026-04-02 at 14.46.04.jpeg
hindalco everlast.jpeg

ನಮಗೆ ಬೇಕಾದ ವಸ್ತುಗಳನ್ನು ನಾವೇ ಉತ್ಪಾದಿಸಿ ಬಳಸುವಂತಾಗಬೇಕು , ಸಚಿವ ವಿ ಸುನೀಲ್ ಕುಮಾರ್

ಟ್ರೆಂಡಿಂಗ್
share whatsappshare facebookshare telegram
14 Jan 2022
post image

ಕಾರ್ಕಳ : ನಮಗೆ ಬೇಕಾದ ವಸ್ತುಗಳನ್ನು ನಾವೇ ಉತ್ಪಾದಿಸಿ ಬಳಸುವಂತಾಗಬೇಕು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶ್ರೀ ವಿ ಸುನಿಲ್ ಕುಮಾರ್ ಹೇಳಿದರು, ನಿಟ್ಟೆ ಕಾಲೇಜು ಸಭಾಂಗಣದಲ್ಲಿ ನಡೆದ ಭಾರತ ಸರ್ಕಾರದ ಎಸ್ ಎಫ್ ಯು ಆರ್ ಟಿ ಐ ಸ್ಟೀಮ್ ನಿಂದ ಪ್ರಾಯೋಜಿತ ಹಲಸಿನ ಹಣ್ಣಿನ ಸಂಸ್ಕರಣ ಕ್ಲಸ್ಟರ್ ಶಂಕುಸ್ಥಾಪನಾ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಸಚಿವರು ಪ್ರಧಾನಿ ಮೋದಿಯವರ ಆತ್ಮನಿರ್ಭರ ಭಾರತದ ಕಲ್ಪನೆಯಡಿಯಲ್ಲಿ ದೇಶಾದ್ಯಂತ ಹತ್ತಾರು ಪ್ರಯೋಗಗಳು ನಡೆಯುತ್ತಿವೆ. ,ಒಂದು ತಾಲೂಕು ಒಂದು ಉತ್ಪನ್ನ ಯೋಜನೆಯನ್ನು ಕಾರ‍್ಯರೂಪಕ್ಕೆ ತರಲಾಗುತ್ತಿದ್ದು ,ಗ್ರಾಮೀಣ ಉತ್ಪನ್ನಗಳಿಗೆ ಮಹತ್ವ ನೀಡಲಾಗುತ್ತಿದೆ. ಎಂದರು ಹಲಸಿನ ಹಣ್ಣಿನ ಸಂಸ್ಕರಣ ಕ್ಲಸ್ಟರ್ ಘಟಕದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿ ವಿನಯ್ ಹೆಗ್ಡೆ ಮಾತನಾಡಿ ನಿಟ್ಟೆಯಲ್ಲಿ ಅಭಿವೃದ್ದಿಯ ಕ್ರಾಂತಿಯಾಗಿ ,ಸ್ಥಳಿಯರಿಗೆ ಉದ್ಯೋಗವಾಕಾಶ ನೀಡುವ ಮೂಲಕ ಅಭಿವೃದ್ದಿ ಪಥದತ್ತ ಸಾಗಲಿ ಎಂದು ಶುಭ ಹಾರೈಸಿದರು ,

ಎ.ಐ.ಸಿ ನಿಟ್ಟೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಎ ಪಿ ಆಚಾರ್ ಕಂಪೆನಿಯ ಮಹತ್ವವನ್ನು ವಿವರಿಸಿದರು . ಸಭೆಯಲ್ಲಿ ನಿಟ್ಟೆ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಎನ್ ಸಾಲಿಯಾನ್, ಸುಫಲ ಫಾರ್ಮರ್ ಪ್ರೋಡ್ಯೂಸರ್ ಕಂಪನಿ ಅಧ್ಯಕ್ಷÀ ಶ್ರೀ ನಾರಾಯಣ ಟಿ ಪೂಜಾರಿ, ಸುಫಲ ಫಾರ್ಮಸ್ ಪ್ರೊಡ್ಯೂಸರ್ ಕಂಪನಿ(ನಿ) ಆಡಳಿತ ನಿರ್ದೇಶಕರಾದ ನವೀನ್ ನಾಯಕ್ ಉಪಸ್ಥಿತರಿದ್ದರು .

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.