logo
WhatsApp Image 2026-04-02 at 14.46.04.jpeg
hindalco everlast.jpeg

ಮಂಗಳೂರಿಗೆ ಬೇಡವಾದ ಆನ್‌ಲೈನ್ ಪೈಲಟ್ ಪ್ರಾಜೆಕ್ಟ್ ಉಡುಪಿಗೇಕೆ ?

ಕರಾವಳಿ
share whatsappshare facebookshare telegram
27 Feb 2023
post image

ಭೂ ಮಾರಾಟ, ಖರೀದಿ ಇತ್ಯಾದಿ ದಾಖಲೆಗಳ ನೋಂದಣಿಯನ್ನು ಕಡ್ಡಾಯವಾಗಿ ಆನ್‌ಲೈನ್ ಮೂಲಕ ನಡೆಸುವ ಸರಕಾರದ ಕಾವೇರಿ ವೆಬ್ ಪೋರ್ಟಲ್ ಸೇವೆಯನ್ನು ಮಂಗಳೂರು ತಾಲೂಕು ನೋಂದಾವಣಾ ಕಚೇರಿಯಲ್ಲಿ ಸಾರ್ವಜನಿಕರ ವಿರೋಧದ ಕಾರಣ ರದ್ಧು ಪಡಿಸಿರುವ ಬೆನ್ನಿಗೆ ಆ ಕಡ್ಡಾಯ ಆನ್‌ಲೈನ್ ಪ್ರಾಜೆಕ್ಟನ್ನು ಉಡುಪಿಯಲ್ಲಿ ಜಾರಿಗೊಳಿಸಲು ದಿಢೀರ್ ಯತ್ನ ನಡೆದಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಆರೋಪಿಸಿದ್ದಾರೆ. ಮಂಗಳೂರು ತಾಲೂಕು ನೋಂದಣಾಧಿಕಾರಿಗಳ ಕಚೇರಿಯಲ್ಲಿ ಅಂತಹ ಪ್ರಯತ್ನ ನಡೆದಾಗ ಜನಸಾಮಾನ್ಯರೊಂದಿಗೆ ವಕೀಲರು, ದಸ್ತಾವೇಜು ಬರಹಗಾರರು ವಿರೋಧಿಸಿದ್ದರು.

ಜನರ ವಿರೋಧಕ್ಕೆ ಸ್ಪಂದಿಸಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್, ಜನಪ್ರತಿನಿಧಿಗಳಾದ ಯು ಟಿ ಖಾದರ್, ನಳಿನ್ ಕುಮಾರ್ ಕಟೀಲ್, ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್ ಅವರು ಯೋಜನೆಯನ್ನು ಕೈಬಿಡುವಂತೆ ಸರಕಾರದ ಮೇಲೆ ಒತ್ತಡ ಹೇರಿದ್ದರು. ಜನಪ್ರತಿನಿಧಿಗಳ ಒತ್ತಡದ ಕಾರಣ ಮಂಗಳೂರು ತಾಲೂಕು ನೋಂದಣಾಧಿಕಾರಿಗಳ ಕಚೇರಿಯಲ್ಲಿ ಆನ್‌ಲೈನ್ ಜಾರಿ ಯೋಜನೆಯನ್ನು ರದ್ಧುಪಡಿಸಲಾಯಿತು. ಮಂಗಳೂರಿನಲ್ಲಿ ರದ್ದಾದ ಯೋಜನೆಯನ್ನು ಇದೀಗ ಉಡುಪಿಗೆ ವರ್ಗಾಯಿಸಿದ್ದು ಮಾರ್ಚ್ 1ರಿಂದ ಉಡುಪಿಯ ಹಿರಿಯ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಕಾವೇರಿ-2 ವೆಬ್ ಪೋರ್ಟಲ್ ಸೇವೆಯನ್ನು ಕಡ್ಡಾಯವಾಗಿ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಮಂಗಳೂರಿನಲ್ಲಿ ರದ್ದಾದ ಯೋಜನೆಯನ್ನು ಮಂಗಳೂರಿನ ಜನರು, ಜನಪ್ರತಿನಿಧಿಗಳು, ವಕೀಲರು ಹಾಗೂ ದಸ್ತಾವೇಜು ಬರಹಗಾರರ ವಿರೋಧದ ಕಾರಣ ರದ್ದಾಗಿರುವ ಆನ್‌ಲೈನ್ ಪ್ರಾಜೆಕ್ಟನ್ನು ಉಡುಪಿಯ ಜನರ ಮೇಲೆ ಹೇರಿರುವುದು ಖಂಡನೀಯ. ಈಗಾಗಲೇ ನಗರಸಭೆ, ತಾಲೂಕು ಕಚೇರಿ, ನಗರಾಭಿವೃದ್ಧಿ ಪ್ರಾಧಿಕಾರ ಮುಂತಾದ ಇಲಾಖೆಗಳಲ್ಲಿ ಸರ್ವರ್ ಸಮಸ್ಯೆಯಿಂದ ಜನರು ರೋಸಿಹೋಗಿದ್ದಾರೆ. ಇದೀಗ ಭೂ ಮಾರಾಟ ಹಾಗೂ ಖರೀದಿಯ ದಾಖಲೆಗಳನ್ನು ಆನ್ಲೈನ್ ಮೂಲಕ ಅಪ್ಲೋಡ್ ಮಾಡುವುದರ ಸಾಧಕ ಭಾದಕವನ್ನು ತಿಳಿಯದೆ ಏಕಾಏಕಿ ಈ ಯೋಜನೆಯನ್ನು ಜಾರಿಗೊಳಿಸಿ ಜನರನ್ನು ಸಂಕಷ್ಟಕ್ಕೆ ಸಿಲುಕಿಸುವುದು ಸರಿಯಲ್ಲ ಎಂದು ರಮೇಶ್ ಕಾಂಚನ್ ವಿರೋಧ ವ್ಯಕ್ತಪಡಿಸಿದ್ದಾರೆ. ಉಡುಪಿಯ ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ರಘುಪತಿ ಭಟ್ ಮತ್ತಿತರ ಜನಪ್ರತಿನಿಧಿಗಳು ತಕ್ಷಣ ಸ್ಪಂದಿಸಿ ಆನ್‌ಲೈನ್ ಪ್ರಾಜೆಕ್ಟ್ ಜಾರಿಯಾಗದಂತೆ ತಡೆಹಿಡಿಯಲು ಸರಕಾರದ ಮೇಲೆ ಒತ್ತಡ ಹೇರುವಂತೆ ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.