



ಅಂಕಿತ ಪತ್ರಿಕೋಧ್ಯಮ ವಿಭಾಗ ಎಂ ಪಿ ಎಂ ಕಾಲೇಜು ಕಾರ್ಕಳ
ಕೃಷಿ ಸೇವಾ ಕ್ಷೇತ್ರಗಳಲ್ಲಿ ಕೃಷಿ ಸೇವಾ ಕ್ಷೇತ್ರಗಳಲ್ಲಿ ಕಾರ್ಮಿಕರು ಅಗತ್ಯವಿದೆ. ಕಾರ್ಮಿಕರು ಎಂದರೆ ದಿನದ ಕೂಲಿಯನ್ನು ತೆಗೆದುಕೊಂಡು ಕೆಲಸ ಮಾಡುವ ವ್ಯಕ್ತಿಗಳು
ಸರ್ಕಾರವು ಅಸಂಘಟಿತ ವಲಯದ ಕೂಲಿ ಕಾರ್ಮಿಕರನ್ನು ನೋಂದಾಯಿಸಿಕೊಂಡು ವಿವಿಧ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಪ್ರಯತ್ನಿಸುತ್ತಿದೆ 20ನೇ ದಶಕದಲ್ಲಿ ಕೂಲಿ ಕಾರ್ಮಿಕರು ಯಾವುದೇ ಸೌಲಭ್ಯ ಪಡೆಯದೆ ನಿಗದಿತವಾದ ಕನಿಷ್ಠ ವೇತನವನ್ನು ಪಡೆಯಲು ಅರ್ಹರಾಗಿರಲಿಲ್ಲ. ನಂತರದ ವರ್ಷಗಳಲ್ಲಿ ಸರ್ಕಾರವು ಕಾರ್ಮಿಕರನ್ನು ನೊಂದಾಯಿಸಿ ಬಳಿಕ ವಿವಿಧ ಸೌಲಭ್ಯಗಳನ್ನು ಕಾರ್ಮಿಕರಿಗೆ ಒದಗಿಸಿ ಈ ಸೌಲಭ್ಯಗಳನ್ನು ಪಡೆದು ಕಾರ್ಮಿಕರ ಮುಖದಲ್ಲಿ ಮಂದಹಾಸ ಮೂಡಿದೆ ಕರ್ನಾಟಕ ಸರ್ಕಾರವು ಕಟ್ಟಡ ಕಾರ್ಮಿಕರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಅವುಗಳಲ್ಲಿ
ಪಿಂಚಣಿ ಸೌಲಭ್ಯ: ಮೂರು ವರ್ಷದ ಸದಸ್ಯತ್ವದೊಂದಿಗೆ 60 ವರ್ಷ ಪೂರೈಸಿದ ಫಲಾನುಭವಗಳಿಗೆ ಮಾಸಿಕ ಪಿಂಚಣಿ ಸೌಲಭ್ಯ.
ಕುಟುಂಬ ಪಿಂಚಣಿ ಸೌಲಭ್ಯ: ಮೃತ ಪಿಂಚಣಿದಾರರ ಪತಿ/ ಪತ್ನಿಗೆ ಮಾಸಿಕ ಪಿಂಚಣಿ
ದುರ್ಬಳತೆ ಪಿಂಚಣಿ: ಕಾಯಿಲೆಗಳಿಂದ ಅಥವಾ ಕಟ್ಟಡ ಕಾಮಗಾರಿಗಳ ಅಪಘಾತದಿಂದ ಶಾಶ್ವತ ಬಾದಶಃ ಅಂಗವಿಕಲತೆ ಹೊಂದಿದ್ದರೆ ಮಾಸಿಕ ಪಿಂಚಣಿ ಸೌಲಭ್ಯ ಹಾಗೂ ಶೇಕಡವಾರು ದುರ್ಬಳತೆಯನ್ನಾದರಿಸಿ ಅನುಗ್ರಹ ರಾಶಿ ಸಹಾಯದನ ನೀಡಲಾಗುವುದು. ಹೀಗೆ ಹಲವಾರು ಯೋಜನೆಗಳನ್ನು ಸರ್ಕಾರವು ಜಾರಿಗೆ ತಂದಿದೆ ಟೂಲ್ ಕಿಟ್ ಸೌಲಭ್ಯ , ಹೆರಿಗೆ ಸೌಲಭ್ಯ, ಅಂತ್ಯ ಕ್ರಿಯೆ ವೆಚ್ಚ, ಶೈಕ್ಷಣಿಕ ಸಹಾಯಧನ, ವೈದ್ಯಕೀಯ ಸಹಾಯಧನ,ಅಪಘಾತ ಪರಿಹಾರ, ಮದುವೆ ಸಹಾಯಧನ, ತಾಯಿ ಮಗು ಸಹಾಯ ಹಸ್ತ, ಈ ಎಲ್ಲಾ ಸೌಲಭ್ಯಗಳನ್ನು ಸರ್ಕಾರವು ನೀಡುತ್ತಿದೆ ಫಲಾನುಭವಿಗಳಿಗೆ ತುಂಬಾ. ಸಹಾಯವಾಗುತ್ತಿದೆ. ಅಸಂಘಟಿತ ಕಾರ್ಮಿಕ ವರ್ಗಗಳು ಎಂದರೆ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಮೀನುಗಾರರು, ಆಶಾ ಕಾರ್ಯಕರ್ತೆಯರು, ಮನೆ ಕೆಲಸ ಕಾರ್ಮಿಕರು,ಚಾಲಕರು, ಟೈಲರ್ ಗಳು, ಬೀದಿ ಬದಿ ವ್ಯಾಪಾರಿಗಳು, ಇವರಿಗೆ ಸರ್ಕಾರವು ಹಲವಾರು ಸೌಲಭ್ಯಗಳನ್ನು ನೀಡಿದೆ. ಅದರಲ್ಲಿ ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಸರ್ಕಾರವು ಜಾರಿಗೆ ತಂದಿದೆ. 60 ವರ್ಷ ಪೂರ್ಣಗೊಂಡ ನಂತರ ಮಾಸಿಕ ನಿಶ್ಚಿತರ 3000 ಗಳ ಪಿಂಚಣಿ ಸೌಲಭ್ಯ ಒದಗಿಸಿ ಆರ್ಥಿಕ ಭದ್ರತೆಯನ್ನು ನೀಡುತ್ತಿದೆ. ಇದರಿಂದ ಉದ್ಯೋಗಿಗಳಿಗೆ ಸಹಾಯವಾಗಿದೆ. ಉಡುಪಿ ಜಿಲ್ಲೆಯ ಲ್ಲಿ 1,91,804 ಅಸಂಘಟಿತ ವಲಯದ ಕಾರ್ಮಿಕರಿದ್ದು ಅದರಲ್ಲೂ ಇರುವ ಕಟ್ಟಡ ಕಾರ್ಮಿಕರ ಸಂಖ್ಯೆ 14062. ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಿಗೆ ಅಪಘಾತ ಪರಿಹಾರ ಯೋಜನೆಯನ್ನು ಕೂಡ ಜಾರಿಗೆ ತಂದಿದೆ. ಈ ಯೋಜನೆ ಕರ್ನಾಟಕ ರಾಜ್ಯಕ್ಕೆ ಮಾತ್ರ ಅನ್ವಯಿಸುತ್ತದೆ ಹಾಗೆ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು ನಿರ್ವಾಹಕರು ಹಾಗೂ ಕ್ಲೀನರ್ ಗಳಿಗೆ ಅನ್ವಯಿಸುತ್ತದೆ ಈ ಯೋಜನೆಯನ್ನು ಪಡೆಯುವಯೋಮಿತಿ 20 ವರ್ಷದಿಂದ ಎಪ್ಪತ್ತು ವರ್ಷಗಳು. ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ : ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ತಿರುವ ಈ ಕಾರ್ಮಿಕರಿಗೆ ಈ ಯೋಜನೆಯ ಮೊದಲ ಬಾರಿಗೆ ಜಾರಿಯಲ್ಲಿದೆ. ಯೋಜನೆ ಅಪಘಾತ ಸಂಭವಿಸಿದಾಗ ಯೋಜನೆ ಉಪಯೋಗವಾಗುತ್ತದೆ.
ಹೀಗೆ ಸರ್ಕಾರವು ಹಲವಾರು ಯೋಚನೆಗಳನ್ನು ಜಾರಿಗೆ ತಂದಿದೆ. ಇದರಿಂದ ಕಾರ್ಮಿಕರಿಗೆ ತುಂಬಾ ಉಪಯೋಗವಾಗುತಿದೆ. ಹಾಗೂ ಅವರ ಮುಖದಲ್ಲಿ ಸಂತಸವನ್ನು ಕಾಣಬಹುದು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.