



ಉಡುಪಿ: ಹಣ ಕಳೆದು ಹೋದ ಚಿಂತೆಯಿಂದ ಮನನೊಂದ ವ್ಯಕ್ತಿಯೋರ್ವರು ಬಾವಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಅಂಪಾರು ಗ್ರಾಮದಲ್ಲಿ ನಡೆದಿದೆ. ಅಂಪಾರು ಗ್ರಾಮದ ನಿವಾಸಿ 42 ವರ್ಷ ಸುರೇಶ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಮುಳ್ಳುಗುಡ್ಡೆಯ ಸೌಪರ್ಣಿಕ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಸದಾ ಖಿನ್ನತೆಯಿಂದ ಬಳಲುತ್ತಿದ್ದರು. ಡಿ.13ರಂದು ಸುರೇಶ್ ಕೆಲಸಕ್ಕೆ ರಜೆ ಮಾಡಿ ಕೆಲಸದ ಸಂಬಳ ಹಣ ತರಲು ಕಾರ್ಖಾನೆಗೆ ಹೋಗಿದ್ದರು. ಸಂಜೆ ಮನೆಗೆ ಬಂದು ಸಂಬಳದ ಹಣ ಕಳೆದು ಹೋಯಿತೆಂದು ಚಿಂತೆಗೆ ಒಳಗಾಗಿದ್ದರು. ಇದೇ ಕಾರಣದಿಂದ ಅಂದು ರಾತ್ರಿ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.