logo
WhatsApp Image 2026-04-02 at 14.46.04.jpeg
hindalco everlast.jpeg

ಸಾವಿನಲ್ಲೂ ಸಾರ್ಥಕತೆ: ಇಬ್ಬರ ಬಾಳಿಗೆ ಬೆಳಕಾದ ಡಾ. ಭುಜಂಗಶೆಟ್ಟಿ

ಟ್ರೆಂಡಿಂಗ್
share whatsappshare facebookshare telegram
20 May 2023
post image

ಬೆಂಗಳೂರು: ಹೃದಯಾಘಾತಕ್ಕೀಡಾಗಿ ನಿಧನರಾದ ಖ್ಯಾತ ನೇತ್ರ ತಜ್ಞ ಡಾ. ಭುಜಂಗ ಶೆಟ್ಟಿಯವರ ಕಣ್ಣುಗಳು ಇಬ್ಬರ ಬಾಳಿಗೆ ಬೆಳಕಾಗಿದೆ.

ಲಕ್ಷಾಂತರ ಕಣ್ಣುಗಳನ್ನ ದಾನ ಮಾಡುವ ಮೂಲಕ ನೇತ್ರದಾನದ ಕ್ರಾಂತಿ ಮಾಡಿದ್ದ ನೇತ್ರ ತಜ್ಞರಿಂದಲೇ ಇದೀಗ ನೇತ್ರದಾನವಾಗಿದೆ. ಬದುಕಿದ್ದಾಗ ಲಕ್ಷಾಂತರ ಜನರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿ ಅಂಧಕಾರವನ್ನ ನೀಗಿಸಿದ್ದರು.

ಶುಕ್ರವಾರ ತಡರಾತ್ರಿ ಡಾ. ರಾಜ್ ಕುಮಾರ್ ಕಣ್ಣಿನ ಬ್ಯಾಂಕ್ ಗೆ ನೇತ್ರದಾನ ಮಾಡಲಾಗಿದೆ. ನೇತ್ರದಾನ ಮಾಡುವ ಮೂಲಕ ಭುಜಂಗ ಶೆಟ್ಟಿಯವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಮೇ 19ರ ಸಂಜೆ 7:30 ರ ವೇಳೆಗೆ ಮನೆಯಲ್ಲಿದ್ದಾಗ ಡಾ. ಭುಜಂಗ ಶೆಟ್ಟಿಯವರಿಗೆ ಹೃದಯಾಘಾತವಾಗಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.